ಮೂಡುಬಿದಿರೆ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೆÃಮಾಭಿವೃದ್ಧಿ ನಿಧಿ ಹಾಗೂ ಬೆಂಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಫ್ರೆÃಜರ್ ಟೌನ್ನ ಸೈಂಟ್ ಜೋಸೆಫ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ದ್ವಿತೀಯ ಪಿಯುಸಿ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ಯಾಮ್ ವಿಟಲ್ ಆಮ್ಟೆ ಹಾಗೂ ಶ್ರೆÃಯಾಂಕ್ ಎಸ್. ಶೇಟ್ ಇವರಿಗೆ ಪ್ರಥಮ ಸ್ಥಾನ ಹಾಗೂ ಇಂಗ್ಲಿÃಷ್ ಪ್ರಬಂಧ ಸ್ಪರ್ಧೆಯಲ್ಲಿ ನಂದಿನಿ ಎಸ್. ಎಚ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಪ್ರಥಮ ಪಿಯುಸಿ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಪತಂಜಲಿ ಹಾರೆಬೈಲು ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳು ರೂ.೧೨,೦೦೦ , ದ್ವಿತೀಯ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳಿಗೆ ರೂ.೯,೦೦೦ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ರೂ. ೬,೦೦೦ ನಗದು ಬಹುಮಾನ ಪಡೆದಿದ್ದಾರೆ.